Breaking News

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

Spread the love

ಬೆಳಗಾವಿ:  ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ – ಇಬ್ಬರೂ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಇವರು ಗುತ್ತಿಗೆದಾರ ಒಬ್ಬರಿಂದ ರೂ. 68,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇಲಾಖೆ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರ ಒಬ್ಬರಿಂದ ಇಬ್ಬರೂ ಅಧಿಕಾರಿಗಳು ಶೇ.3 ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ