ಸೇಡಂ : ಪತ್ನಿ ಹಾಗೂ ಮಗಳನ್ನು ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿಯ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.
ಪಾನಿಪೂರಿ ವ್ಯಾಪಾರ ಮಾಡಿಕೊಂಡಿದ್ದ ಕಲಬುರಗಿಯ ನಿವಾಸಿಯಾಗಿದ್ದ ದಿಗಂಬರ ಹನುಮಂತಪ್ಪ ಗಾಂಜಲಿ(47) ಕೊಲೆ ಮಾಡಿರುವ ಆರೋಪಿ. ಈ ಪಾಪಿ ಪತ್ನಿ ಜಗದೇವಿ(35) ಹಾಗೂ ಮಗಳು ಪ್ರಿಯಾಂಕಾ(11) ಕೊಲೆ ಮಾಡಿದ್ದಾನೆ.
ಕೆಲವು ತಿಂಗಳ ಹಿಂದೆಯಷ್ಟೇ ಕಲಬುರಗಿಯಿಂದ ಈ ಕುಟುಂಬ ಪಟ್ಟಣಕ್ಕೆ ಬಂದು ನೆಲೆಸಿತ್ತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸದ್ಯ ಕೊಲೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಸೇಡಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.