Breaking News

ಕಾಂಗ್ರೆಸ್ ನ 20 ಶಾಸಕರು ಬಿಜೆಪಿಗೆ ಸೇರಲು ಸಿದ್ಧ : ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್

Spread the love

ಬೆಂಗಳೂರು : ಕಾಂಗ್ರೆಸ್ ನ 20 ಶಾಸಕರು ಬಿಜೆಪಿಗೆ ಸೇರಲು ಸಿದ್ದರಾಗಿದ್ದಾರೆ. ಅದರ ಜವಾಬ್ದಾರಿಯನ್ನು ಸಚಿವ ಮುನಿರತ್ನ ಅವರಿಗೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

 

ಚೌಡಯ್ಯ ಮೆಮೊರಿಯಲ್ ಹಾಲ್ ನಲ್ಲಿ ಏರ್ಪಡಿಸಿದ್ದ ಒಬಿಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಹಿಂದುಳಿದ ವರ್ಗದವರು ದೂರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಅನೇಕ ನಾಯಕರು ಬಿಜೆಪಿ ಸೇರಲಿದ್ದಾರೆ. ಹಿಂದುಳಿದ ವರ್ಗದವರು ಕಾಂಗ್ರೆಸ್‌ನಿಂದ ದೂರವಾಗಿದ್ದಾರೆ. ಅವರಿಗೆ ಹಕ್ಕು ಮತ್ತು ಧ್ವನಿ ನೀಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಅಹಿಂದ ಹೋರಾಟ ಅಧಿಕಾರಕ್ಕೆ ಸೀಮಿತವಾಯಿತು. ಬಿಜೆಪಿ ಹಾಗಲ್ಲ. ಈ ವರ್ಗದ ಅಭಿವೃದ್ಧಿಗೆ ನೈಜ ಕಾಳಜಿ ವಹಿಸಿದೆ ಎಂದು ಹೇಳಿದರು.

ನಮ್ಮ ಸರಕಾರವು ವಿದ್ಯಾರ್ಥಿಗಳಿಗೆ ಮೀಸಲಾತಿ, ಹೆಚ್ಚು ಸ್ಕಾಲರ್ ಶಿಪ್ ನೀಡಿದೆ. ಹಿಂದುಳಿದ ಜಾತಿ ಪಟ್ಟಿಗೆ ಜಾತಿ ಸೇರ್ಪಡೆಯ ಅವಕಾಶವನ್ನೂ ರಾಜ್ಯಗಳಿಗೆ ನೀಡಲಾಗಿದೆ. ಹಿಂದುಳಿದ ವರ್ಗಗಳ ಸಮುದಾಯದ ಜವಾಬ್ದಾರಿಯನ್ನು ಈಶ್ವರಪ್ಪ ಅವರಿಗೆ ನೀಡಿದ್ದೇವೆ. ಅವರು ಶ್ರೀ ನರೇಂದ್ರ ಬಾಬು ಅವರ ಜೊತೆಗೂಡಿ ಒಬಿಸಿಯ ಎಲ್ಲ ಸಮುದಾಯದವರನ್ನು ಬಿಜೆಪಿಗೆ ತರಲಿದ್ದಾರೆ ಎಂದರು.


Spread the love

About Laxminews 24x7

Check Also

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ

Spread the love ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ