Breaking News
Home / ಜಿಲ್ಲೆ / ಬೆಂಗಳೂರು / ಬಿಜೆಪಿಯಲ್ಲಿ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ : ಆರ್ ಅಶೋಕ್

ಬಿಜೆಪಿಯಲ್ಲಿ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ : ಆರ್ ಅಶೋಕ್

Spread the love

ಬೆಂಗಳೂರು: ರಾಜ್ಯ ಭಾರತಿಯ ಜನತಾ ಪಾರ್ಟಿಯಲ್ಲಿ ಬಸವರಾಜ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ, ಗೊಂದಲಗಳಿಲ್ಲ. ಪಕ್ಷ, ಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಿದೆ. ಮತ್ತೆ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಗುರುವಾರ ಪ್ರತಿಪಾದಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅಶೋಕ್, ಸಿಎಂ ಅವರು ವಿರೊಧಪಕ್ಷದವರನ್ನೇ ಓಲೈಸುತ್ತಿದ್ದಾರೆ ಎಂಬ ಅಸಮಾಧಾನ ಸ್ವಪಕ್ಷದ ಶಾಸಕರಲ್ಲಿದೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸಿನವರಿಗೆ ಜಾತಿ, ಧರ್ಮ‌ ಒಡೆಯುವುದೇ ಕೆಲಸವಾಗಿದೆ. ಮತಗಳಿಕೆಗಾಗಿ ಅವರೇನೇ ಮಾಡಿದರೂ ಪ್ರಯೋಜನವಾಗುವುದಿಲ್ಲ. ಅವರದು ಯುದ್ಧಕಾಲೇ ಶಸ್ತ್ರಭ್ಯಾಸ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಅನ್ನು ಜನತೆ ಮತ್ತೆ ತಿರಸ್ಕರಿಸುತ್ತಾರೆ ಎಂದು‌ ವಿಶ್ವಾಸ ವ್ಯಕ್ತಪಡಿಸಿದ ಅವರು, ನಮ್ಮದು ಚುನಾವಣಾ ದೃಷ್ಟಿಯ ಸಿದ್ಧತೆಯಲ್ಲ. ನಿರಂತರ ಸಿದ್ಧತೆ ನಡೆಯುತ್ತಲೇ ಇರುತ್ತದೆ ಎಂದರು.

ಕಾಂಗ್ರೆಸ್ ಒಕ್ಕಲಿಗರ ಸಮಾವೇಶ ಮಾಡಲು ಹೊರಟಿದೆ. ಅದಕ್ಕೆ ನಿಮ್ಮ ಪ್ರತಿಕ್ರಿಯೇನು ಎಂದು ಕೇಳಿದ ಪ್ರಶ್ನೆಗೆ, ಬಿಜೆಪಿ ಎಂದೂ ಜಾತಿ ರಾಜಕಾರಣ ಮಾಡುವುದಿಲ್ಲ. ನಮ್ಮದು ಧರ್ಮರಾಜಕಾರಣ. ಇದನ್ನು ಸ್ಪಷ್ಟವಾಗಿಯೇ ಹೇಳುತ್ತೇನೆ ಎಂದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ