Breaking News
Home / ರಾಜ್ಯ / ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

Spread the love

ಸಿಂಧನೂರು: ನರೇಗಾ ಯೋಜನೆಯಡಿ ಲಭ್ಯವಾದ 5 ಲಕ್ಷ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡ ಸಿಸಿ‌ ರಸ್ತೆ ಕಾಮಗಾರಿ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಶುಕ್ರವಾರ 10 ಜನರನ್ನು ಬಂಧಿಸಿದ್ದಾರೆ.

ಕುನ್ನಟಗಿ ಗ್ರಾಮದ ಕಾಂತರೆಡ್ಡಿ ಎನ್ನುವವರು ನರೇಗಾ ಕೆಲಸ ಕೈಗೆತ್ತಿಕೊಂಡಿದ್ದರು. ಇದೇ ಕೆಲಸದಲ್ಲಿ ಪಾಲುದಾರಿಕೆ ಕೊಡದ ಹಿನ್ನೆಲೆಯಲ್ಲಿ ಹಲವರು ಬಂದು ತಮ್ಮ ಹಲ್ಲೆ ನಡೆಸಿದ್ದಾರೆಂದು ದೂರಿದ್ದರಿಂದ 10 ಕ್ಕೂ ಹಚ್ಚು ಜನರ ವಿರುದ್ಧ ಪ್ರಕರ‌ಣ ದಾಖಲಾಗಿತ್ತು.

ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು‌ ಪಟಾಕಿ ಸಿಡಿಸಿದ ಕಾರಣಕ್ಕೆ ತಮ್ಮ‌ ಮೇಲೆ ಹಲ್ಲೆ ನಡೆಸಿದ್ದಾರೆಂದು 14 ಜನರ ವಿರುದ್ಧ ಮತ್ತೊಂದು‌ ದೂರು ದಾಖಲಾಗಿದೆ. ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು 10 ಜನರನ್ನು ಬಂಧಿಸಿದ್ದಾರೆ. ಘರ್ಷಣೆಯಲ್ಲಿ‌ ಕಾರೊಂದು ಜಖಂಗೊಂಡಿದೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ