Breaking News

ಕಾಸ್ಮೊಪಾಲಿಟನ್ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ: ಬೊಮ್ಮಾಯಿ

Spread the love

ಬೆಳಗಾವಿ: ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ. ಕಾಸ್ಮೊಪಾಲಿಟನ್ ಸಂಸ್ಕೃತಿಯನ್ನು ಅಳವಡಿಸಿಕೊಂಡಿರುವ ವಿಶಾಲ ಮನೋಭಾವದ ಜನರು ಈ ನಗರದವರು ಎಂದು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಹೇಳಿದರು.

ನಗರದ ‌ಎಸ್‌ಪಿಎಂ ರಸ್ತೆಯಲ್ಲಿ ಶಿವಾಜಿ ಉದ್ಯಾನದ ಸಮೀಪದಲ್ಲಿ ಸ್ಮಾರ್ಟ್ ‌ಸಿಟಿ‌ ಯೋಜನೆಯಲ್ಲಿ ನಿರ್ಮಿಸಲಾದ ರವೀಂದ್ರ ಕೌಶಿಕ್ ಇ- ಗ್ರಂಥಾಲಯವನ್ನು ಭಾನುವಾರ ಉದ್ಘಾಟಿಸಿ‌ ಅವರು ಮಾತನಾಡಿದರು.

ಸಂಕುಚಿತ ಮನೋಭಾವಕ್ಕೆ ಇಲ್ಲಿ ಜಾಗ ಇಲ್ಲ ಎನ್ನುವುದನ್ನು ಈಚೆಗೆ ನಡೆದ ಮಹಾನಗರಪಾಲಿಕೆ ಸಾರ್ವತ್ರಿಕ ‌ಚುನಾವಣೆಯಲ್ಲಿ ಜನರು ತೋರಿಸಿಕೊಟ್ಟಿದ್ದಾರೆ. ಅಭಿವೃದ್ಧಿಗೆ ನಮ್ಮ ಬೆಂಬಲ ಎನ್ನುವುದನ್ನು ತಿಳಿಸಿದ್ದಾರೆ ಎಂದರು.

ಇಲ್ಲಿನ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ನಗರದ ಅಭಿವೃದ್ಧಿಗಾಗಿ ಡಬಲ್ ಎಂಜಿನ್ ರೀತಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಮಹಾನಗರಪಾಲಿಕೆ ಸದಸ್ಯರ ಜವಾಬ್ದಾರಿ ಹೆಚ್ಚಾಗಿದೆ. ಜನರ ಸೇವೆಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ನಗರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ಕೊಡಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿಯು ಕರ್ನಾಟಕದ ಕಿರೀಟ. ಅದರ ಗೌರವ ಹೆಚ್ಚಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವರಾದ ಉಮೇಶ ಕತ್ತಿ, ಬಿ.ಎ. ಬಸವರಾಜ, ಶಾಸಕ ಅಭಯ ಪಾಟೀಲ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮೊದಲಾದವರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ