Home / ರಾಜಕೀಯ / ರಸ್ತೆ ಗುಂಡಿ ಸರಿಪಡಿಸದ ಇಂಜಿನಿಯರ್​​ಗಳಿಗೆ ಅಮಾನತು ಶಿಕ್ಷೆ.!

ರಸ್ತೆ ಗುಂಡಿ ಸರಿಪಡಿಸದ ಇಂಜಿನಿಯರ್​​ಗಳಿಗೆ ಅಮಾನತು ಶಿಕ್ಷೆ.!

Spread the love

ನಗರದ ಕೆಟ್ಟ ರಸ್ತೆಗಳಿಗೆ ಪಾಲಿಕೆ ನಾಲ್ವರು ಇಂಜಿನಿಯರ್​ಗಳೇ ನೇರ ಹೊಣೆ ಎಂದು ಹೇಳಿದ ಮಹಾರಾಷ್ಟ್ರದ ಥಾಣೆ ನಾಗರಿಕ ಆಯುಕ್ತ ಡಾ. ವಿಪಿನ್​ ಶರ್ಮಾ ಅವರನ್ನು ಅಮಾನತುಗೊಳಿಸಿದ್ದಾರೆ.

ಈ ನಾಲ್ವರು ಇಂಜಿನಿಯರ್​ಗಳು ರಸ್ತೆಗಳಲ್ಲಿ ಗುಂಡಿ ತುಂಬಿಸುವ ಕಾರ್ಯ ಮಾಡಿಲ್ಲ ಹಾಗೂ ಗುತ್ತಿಗೆದಾರರ ಕಳಪೆ ಕಾಮಗಾರಿಯ ಬಗ್ಗೆಯೂ ಲಕ್ಷ್ಯ ನೀಡಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಉತ್ತಲ್ಸರ್​​ ವಾರ್ಡ್ ಎಕ್ಸಿಕ್ಯೂಟಿವ್​ ಇಂಜಿನಿಯರ್ ಚೇತನ್​ ಪಡೆಲ್​, ವಾರ್ತಾಕ್​ ನಗರ ವಾರ್ಡ್​ನ ಪ್ರಕಾಶ್​ ಕಡ್ತಾರೆ, ಜ್ಯೂನಿಯರ್​ ಇಂಜಿನಿಯರ್​ ಸಂದೀಪ್​ ಸಾವಂತ್​ ಹಾಗೂ ಲೋಕಮಾನ್ಯ ಸಾರ್ವಕರ್​ ನಗರ ವಾರ್ಡ್​ನ ಸಂದೀಪ್​ ಗಾಯಕ್ವಾಡ್​ರನ್ನು ಅಮಾನತು ಮಾಡಲಾಗಿದೆ.

ಸಚಿವ ಏಕನಾಥ ಶಿಂಧೆ ಶುಕ್ರವಾರ ನಗರದ ರಸ್ತೆಗಳ ಸಮೀಕ್ಷೆ ನಡೆಸಿದ ಬೆನ್ನಲ್ಲೇ ಪಾಲಿಕೆಯಿಂದ ಈ ನಿರ್ಧಾರ ಇಂದು ಹೊರಬಿದ್ದಿದೆ. ರಸ್ತೆಗಳ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದರು.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ