Breaking News

ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್; ಆ ಮೂರು ಕೃಷಿ ಕಾಯ್ದೆಗಳು ಯಾವುದು..?

Spread the love

ಬೆಂಗಳೂರು: ಭಾರತ​ ಬಂದ್​ಗೆ ಮತ್ತೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿಯುತ್ತಿದ್ದಾರೆ. ಇದಕ್ಕಾಗಿ ಪೂರ್ವ ಸಿದ್ಧತೆ ಮಾಡ್ಕೊಂಡಿರೋ ರೈತರು, ದೇಶಾದ್ಯಂತ ಜಾಥಾ ನಡೆಸುತ್ತಿದ್ದಾರೆ. ಈ ಬಾರಿಯೂ ಪ್ರತಿಭಟನೆ, ಜಾಥಾ ಮೂಲಕವೇ ಕೇಂದ್ರ, ರಾಜ್ಯದ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.

ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ ಈಗಷ್ಟೇ ಹತೋಟಿಗೆ ಬಂದಿದೆ. ಜನರ ಬದುಕು ಸಹಜ ಸ್ಥಿತಿಗೆ ಮರಳಿದೆ. ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ ಕಾಣ್ತಿದೆ. ಜನ ನೆಮ್ಮದಿಯ ಜೀವನ ಸಾಗಿಸ್ತಿರೋವಾಗಲೇ ಮತ್ತೆ ಬಂದ್​ ಎಂಬ ಶಬ್ದ ಮಾರ್ಧನಿಸಿದೆ. ಆದ್ರೆ ಈ ಬಾರಿಯ ಬಂದ್​ ಕೊರೊನಾ ಕಾರಣದಿಂದಲ್ಲ. ಬದಲಾಗಿ ಕೇಂದ್ರ ತಂದಿರೋ ಮೂರು ಕೃಷಿ ಕಾಯ್ದೆಗಳು, ಖಾಸಗೀಕರಣ ಹಾಗೂ ಬೆಲೆ ಏರಿಕೆ ಏಫೆಕ್ಟ್‌​.

ಮೂರು ಕೃಷಿ ಕಾಯ್ದೆಗಳು ಯಾವುವು?

  • ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ
  • ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
  • ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು

Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ