ಹೊಸದಿಲ್ಲಿ: ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸಮೀಕ್ಷೆಯೊಂದನ್ನು ಕೈಗೊಳ್ಳುತ್ತಿದೆ ಎಂದು ಉನ್ನತ ಮೂಲಗಳು ವರದಿ ಮಾಡಿವೆ.
ಸಬ್ಸಿಡಿಯನ್ನು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸೀಮಿತಗೊಳಿಸುವ ಚಿಂತನೆಯೂ ಇದೆ ಎನ್ನಲಾಗಿದೆ. ಈ ಹಿಂದೆ ಎಲ್ಪಿಜಿ ದರ ಇಳಿಕೆಯಾಗಿದ್ದರಿಂದ 2020ರ ಮೇ ತಿಂಗಳಿ ನಲ್ಲಿ ಸರಕಾರವು ಎಲ್ಪಿಜಿ ಸಬ್ಸಿಡಿಯನ್ನು ಹಿಂದೆ ಗೆದುಕೊಂಡಿತ್ತು.
ಆಗ ದಿಲ್ಲಿಯಲ್ಲಿ 14.2 ಕೆ.ಜಿ.ಯ ಅಡುಗೆ ಅನಿಲ ಸಿಲಿಂಡರ್ಗೆ 581.50 ರೂ. ದರ ಇದ್ದರೆ ಈಗ ದರ ಏರಿಕೆಯಾಗಿ 884.50 ರೂ. ಇದೆ. ಈ ಹಿನ್ನೆಲೆಯಲ್ಲಿ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ.