Breaking News
Home / ಜಿಲ್ಲೆ / ಬೆಂಗಳೂರು / ಎಸ್‌ಟಿಪಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಆದೇಶ

ಎಸ್‌ಟಿಪಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಆದೇಶ

Spread the love

ಬೆಂಗಳೂರು: ಬೆಳಗಾವಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಾಣಕ್ಕೆ ₹2 ಕೋಟಿ ವೆಚ್ಚ ಮಾಡಿದ ಬಳಿಕ ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶಿಸಿದೆ.

ಬೆಳಗಾವಿ ನಿವಾಸಿಗಳಾದ ನಾರಾಯಣ ಬೈರು ಸಾವಂತ್ ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು.

ಬೆಳಗಾವಿ ಪಾಲಿಕೆ ಆಯುಕ್ತರು ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹಣ ವೆಚ್ಚ ಮಾಡಿಲ್ಲ ಎಂದು ಹೇಳಲಾಗಿದೆ. ಆದರೆ, ಬೇರೆ ದಾಖಲೆಗಳಲ್ಲಿ ಹಣ ಖರ್ಚಾಗಿರುವುದು ಉಲ್ಲೇಖವಾಗಿದೆ. ಹೀಗಾಗಿ, ಈ ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.

ಅಲರವಾಡದಿಂದ ಹಲಗೆ ಗ್ರಾಮಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ಕಾರಣ ಒಳಗೊಂಡ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಪೀಠ ಸೂಚಿಸಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ