ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹದಿಂದ ಮೂವರ ಕೊಲೆಯಾದ ಧಾರುಣ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಒಂದೇ ಕುಟುಂಬದ ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16)ಎಂಬುವವರ ಕೊಲೆಯಾಗಿದೆ. ಅಳಿಯ ಸಾಯಿ ಎಂಬಾತನೆ ಅತ್ತೆ ಹೆಂಡತಿ ಹಾಗೂ ಸೊಸೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ.
ಕಳೆದ ಆರು ತಿಂಗಳ ಹಿಂದೆಯಷ್ಟೇ ಮಗಳು ವೈಷ್ಣವಿ ಮದುವೆ ಜರುಗಿತ್ತು. ಆದರೆ, ಅಳಿಯ ಮಗಳ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೆ ಜಗಳ ಆಡುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಮಗಳು ತವರು ಮನೆ ಸೇರಿದ್ದರು ಎಂದು ನೆರೆ ಮನೆಯವರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಮೃತರು ಕೊಲೆಯಾಗುವ ಮುನ್ನ ನೆರೆಮನೆಯವರಿಗೆ ಫೋನ್ ಮಾಡಿದ್ದಾರೆ. ಆದರೆ, ಅವರು ಕರೆ ಸ್ವೀಕರಿಸಿಲ್ಲ. ಬೆಳಗ್ಗೆ ಮರಳಿ ಕರೆ ಮಾಡಿದರೆ ಯಾರು ಕರೆ ಸ್ವೀಕರಿಸಿಲ್ಲ. ಅನುಮಾನ ಬಂದು ಹೋಗಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಎಸ್ ಪಿ ಪ್ರಕಾಶ ನಿಕ್ಕಂ, ಹೆಚ್ಚುವರಿ ಎಸ್ ಪಿ ಶ್ರೀಹರಿಬಾಬು ಸೇರಿದಂತೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಳಿಯ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.