Breaking News

ಪಾದಯಾತ್ರೆ ಶಾಪದಿಂದ ಬಿಎಸ್‍ವೈ ಅಧಿಕಾರ ಕಳೆದುಕೊಂಡರು: ಕಾಶಪ್ಪನವರ್

Spread the love

ದಾವಣಗೆರೆ: ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆ ಶಾಪದಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅಧಿಕಾರ ಕಳೆದುಕೊಂಡರು ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಶಾಪದ ಹೇಳಿಕೆಯನ್ನು ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ನಾನು ಹೇಳಿಕೆ ನೀಡಿದ್ದೆ 2ಎ ಮೀಸಲಾತಿಗಾಗಿ ಶ್ರೀಗಳಿಗೆ ಪಾದಯಾತ್ರೆ ಮಾಡುವಂತೆ ಮಾಡಿದ್ದರು. ಆದರೂ, ಅವರು ನೀಡಿದ ಮಾತನ್ನು ಉಳಿಸಿಕೊಳ್ಳಲಿಲ್ಲ. ಅದೇ ಕಾರಣಕ್ಕೆ ಶ್ರೀಗಳ ಪಾದಯಾತ್ರೆ ಶಾಪ ಅವರಿಗೆ ತಟ್ಟಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದರೆ ಯಾರಾದ್ರು ಸರಿ ಅವರಿಗೆ ಶಾಪ ತಟ್ಟುತ್ತದೆ ಎಂದು ಕಾಶಪ್ಪನವರ್ ಪರೋಕ್ಷವಾಗಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಾಪದ ಎಚ್ಚರಿಕೆ ನೀಡಿದ್ದಾರೆ.

ವಚನಾನಂದ ಸ್ವಾಮೀಜಿಗೆ ಟಾಂಗ್ ಕೊಟ್ಟ ಕಾಶಪ್ಪನವರ್, ವಚನಾನಂದ ಸ್ವಾಮೀಜಿ ಸಾಫ್ಟ್ ವೇರ್ ನಾವು ಹಾರ್ಡ್‍ವೇರ್, ಅವರು ಎಸಿರೂಂ ನಲ್ಲಿ ಕೂತು ಹೋರಾಟ ಮಾಡುತ್ತಾರೆ ನಾವು ಬಿಸಿಲಲ್ಲಿ ಹೋರಾಟ ಮಾಡುತ್ತೇವೆ. ಹೋರಾಟಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಯಾವಾಗ ಹೋಗುತ್ತಾರೋ ಅವಾಗ ಬಿಳ್ಕೋಡುಗೆ ಕೊಡುತ್ತೇವೆ ಎಂದರು.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ