ಗದಗ: ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದು ನೌಕರನೋರ್ವ ಗ್ರಾಮ ಪಂಚಾಯತ್ ಕಚೇರಿಯಲ್ಲಿಯೇ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಹೊಳಗುಂದಿ (28) ಆತ್ಮಹತ್ಯೆ ಶರಣಾದ ಸಿಬ್ಬಂದಿ. ಮೃತ ಮಲ್ಲಪ್ಪ ಸ್ಥಳೀಯ ಗ್ರಾಮ ಪಂಚಾಯತ್ನಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಇತ್ತೀಚಿಗೆ ಆತನನ್ನು ಕೆಲಸದಿಂದ ಬಿಡಿಸಲಾಗಿತ್ತು ಎನ್ನಲಾಗಿದೆ.
ಇದರಿಂದ ಮನನೊಂದ ಮಲ್ಲಪ್ಪ ಕಚೇರಿಯಲ್ಲಿ ಅಧ್ಯಕ್ಷರು ಕೂರುವ ಟೇಬಲ್ ಮುಂದೆಯೇ ನೇಣಿಗೆ ಶರಣಾಗಿದ್ದಾನೆ.
ಇನ್ನು ನೇಣು ಹಾಕಿಕೊಂಡು ದೃಶ್ಯ ಪಂಚಾಯತಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಿಸಿಟಿವಿ ದೃಶ್ಯ ನೋಡಿ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.