Breaking News

ಗುಳೇದಗುಡ್ಡ: ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು

Spread the love

ಗುಳೇದಗುಡ್ಡ: ಈಜು ಕಲಿಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಕೊಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಟ್ನಳ್ಳಿ ಗ್ರಾಮದ ಮಲ್ಲಪ್ಪ ಬೈಲಪ್ಪ ಅಂಬಿಗೇರಿ(12) ಹಾಗೂ ಮನೋಜ್ ಮಲ್ಲಪ್ಪ ಉಪ್ಪಾರ(10) ಮೃತ ಬಾಲಕರು. ಇಂದು ಮಧ್ಯಾಹ್ನ 12 ಗಂಟೆಗೆ ಮಲಪ್ರಭಾ ನದಿಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳೀಯರೊಂದಿಗೆ ಪೋಲಿಸರು ಬಾಲಕರ ಶವಗಳನ್ನು ಹೊರಗೆ ತೆಗೆದಿದ್ದಾರೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ