ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೇ ಮೂರು ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ 5 ಕ್ಕೇರಿದೆ.
ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ ಬೇಧಿ ಚಿಕಿತ್ಸೆಗಾಗಿ ಬಳ್ಳಾರಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಾವನೂರು ಬಸಮ್ಮ, ಲಕ್ಷ್ಮಮ್ಮ, ಅಂಗೂರುಗಟ್ಟಿ ಗೋಣೆಪ್ಪ ಎಂಬಾತರು ಅಸುನೀಗಿದ್ದಾರೆ. ಜೊತೆಗೆ ಮೊನ್ನೆ ಬಂಧುಗಳ ಮನೆಗೆ ಭೇಟಿ ನೀಡಿದ ಮಹಾದೇವಪ್ಪ ಹೆಳ್ಳಪ್ಪ ಎಂಬುವವರು ಕೂಡ ಮೃತಪಟ್ಟಿದ್ದಾಗಿ ನ್ಯೂಸ್ಫಸ್ಟ್ಗೆ ಮಾಹಿತಿ ಲಭ್ಯವಾಗಿದೆ.

ಕಳೆದ 20 ದಿನಗಳ ಹಿಂದೆ ಕುಲುಷಿತ ನೀರು ಕುಡಿದು ಅನಾರೋಗ್ಯಕ್ಕೊಳಗಾದ 105 ಕ್ಕೂ ಹೆಚ್ಚು ಮಂದಿಯನ್ನು ಹಡಗಲಿ, ಹೊಸಪೇಟೆ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಅವಘಡಕ್ಕೆ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಕಾರಣ ಎನ್ನಲಾಗಿದೆ.