Breaking News

ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ

Spread the love

ತುಮಕೂರು: ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿ‌ನ ಹುಚ್ಚನಹಟ್ಟಿ ಬಳಿ ನಡೆದಿದೆ. 6 ಜನರ ಯುವಕರ ಗುಂಪೊಂದು ಕುರಿಗಾಹಿಗಳನ್ನು ನೂಕಿದ್ದು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ತಿಪಟೂರು ನಗರದ ಗಗನ್, ರಾಕೇಶ್, ಅರ್ಜುನ್, ಸ್ವರೂಪ್ ಸೆರಿದಂತೆ ಒಟ್ಟು 6 ಜನ ಸೇರಿ ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಕುರಿ ಮೇಯಿಸಲು ಬಂದಿದ್ದವರ ಮೇಲೆ ರಾಕ್ಷಸನಂತೆ ಎರಗಿದ ಗಗನ್, ಹಲ್ಲೆ ಮಾಡಿದ್ದಾನೆ. ಗಗನ್ ಈ ಹಿಂದೆ 9 ತಿಂಗಳುಗಳ ಕಾಲ ಜೈಲಿನಲ್ಲಿದ್ದ ಎನ್ನಲಾಗಿದೆ. ಸದ್ಯ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತಿಪಟೂರು ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರು ಪುಂಡರು ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ