ತುಮಕೂರು: ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಬಳಿ ನಡೆದಿದೆ. 6 ಜನರ ಯುವಕರ ಗುಂಪೊಂದು ಕುರಿಗಾಹಿಗಳನ್ನು ನೂಕಿದ್ದು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ತಿಪಟೂರು ನಗರದ ಗಗನ್, ರಾಕೇಶ್, ಅರ್ಜುನ್, ಸ್ವರೂಪ್ ಸೆರಿದಂತೆ ಒಟ್ಟು 6 ಜನ ಸೇರಿ ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಕುರಿ ಮೇಯಿಸಲು ಬಂದಿದ್ದವರ ಮೇಲೆ ರಾಕ್ಷಸನಂತೆ ಎರಗಿದ ಗಗನ್, ಹಲ್ಲೆ ಮಾಡಿದ್ದಾನೆ. ಗಗನ್ ಈ ಹಿಂದೆ 9 ತಿಂಗಳುಗಳ ಕಾಲ ಜೈಲಿನಲ್ಲಿದ್ದ ಎನ್ನಲಾಗಿದೆ. ಸದ್ಯ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರು ಪುಂಡರು ಪರಾರಿಯಾಗಿದ್ದಾರೆ.