Breaking News

ರಾಜ್ಯ ಉಪಚುನಾವಣೆ; ಹಾನಗಲ್​​​, ಸಿಂದಗಿಯತ್ತ ತಲೆ ಹಾಕದೆ ಶೆಟ್ಟರ್​​​ ದೂರ ಉಳಿದಿದ್ಯಾಕೆ?

Spread the love

ಧಾರವಾಡ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ಜೋರಾಗಿದೆ. ಹಾನಗಲ್​​ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆ ಗೆಲ್ಲಲು ಬಿಜೆಪಿ ಭಾರೀ ಸರ್ಕಸ್​​ ನಡೆಸುತ್ತಿದ್ದಾರೆ. ಹೀಗಿರುವಾಗಲೇ ತೆರೆಮರೆಯಲ್ಲೇ ಉಪಚುನಾವಣೆಯಿಂದ ಮಾಜಿ ಸಿಎಂ ಜಗದೀಶ್​​ ಶೆಟ್ಟರ್​​ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮಾಜಿ ಸಿಎಂ ಜಗದೀಶ್​​ ಶೆಟ್ಟರ್​​ಗೆ ರಾಜ್ಯ ಬಿಜೆಪಿ ಯಾವುದೇ ಜವಾಬ್ದಾರಿ ನೀಡಿಲ್ಲ. ಜಗದೀಶ್​​​ ಶೆಟ್ಟರ್​​ ತವರು ಜಿಲ್ಲೆ ಧಾರವಾಡ ಪಕ್ಕದ ಜಿಲ್ಲೆಗಳಲ್ಲೇ ಉಪಚುನಾವಣೆ ಎದುರಾಗುತ್ತಿದೆ. ಹೀಗಿದ್ದರೂ ಶೆಟ್ಟರ್​​​​ಗೆ ಬಿಜೆಪಿ ಯಾವುದೇ ಜವಾಬ್ದಾರಿ ನೀಡಿಲ್ಲ. ಶೆಟ್ಟರ್​​ ಕೂಡ ಇದುವರೆಗೂ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಅಚ್ಚರಿ ನಡೆಯೂ ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದರು ಜಗದೀಶ್​ ಶೆಟ್ಟರ್​​. ಆದರೀಗ, ಎರಡು ಕ್ಷೇತ್ರಗಳ ಉಪಚುನಾವಣೆಗೆ ತಲೆ ಹಾಕದೆ ಅಚ್ಚರಿ ಮೂಡಿಸಿದ್ದಾರೆ.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ