ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು.
ಸಚಿವ ಕಾರಜೋಳ ಮನೆಗೆ ಮುತ್ತಿಗೆ ಹಾಕಲು ಹೊರಟ ರನ್ನ ಸಕ್ಕರೆ ಕಾಖಾ೯ನೆ ಕಾರ್ಮಿಕರು & ರೈತರನ್ನು ಪೊಲೀಸರು ಅಡ್ಡಗಟ್ಟಿದರು.
ಅಡ್ಡ ಹಾಕಿದ ಬ್ಯಾರಿಕೇಡ್ ಕಿತ್ತೊಗೆದು ಪ್ರತಿಭಟನಾ ಮೆರವಣಿಗೆಗೆ ಮುಂದಾದರು.
ಈ ಸಮಯದಲ್ಲಿ ರೈತರು ಮತ್ತು ಕಾರ್ಮಿಕರನ್ನ ತಡೆದ ಪೋಲಿಸರೊಂದಿಗೆ ವಾಗ್ವಾದ ನಡೆಯಿತು.ಹಾಕಿದ್ದ ಬ್ಯಾರಿಕೇಡ್ ಕಿತ್ತು ಹಾಕಿ ಮುತ್ತಿಗೆ ಹಾಕಲು ಯತ್ನಿಸಿದರು.ಪ್ರತಿಭಟನಾಕಾರರನ್ನು ತಡೆಯಲು ಪೋಲಿಸರು ಹರಸಾಹಸ ಪಟ್ಟರು,ಹೆಚ್ಚುವರಿ ಪೋಲಿಸ ನಿಯೋಜನೆ ಮಾಡಿದ್ದರು ಸಹ,ಸಚಿವರ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆ ತಡೆಯುತ್ತಲೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ಮುಂದುವರೆಸಿದರು.ಈ ಸಂದರ್ಭದಲ್ಲಿ ವಿಜಯಪುರ ಬೆಳಗಾವಿ ರಾಜ್ಯ ಹೆದ್ದಾರಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿರುವ ಪರಿಣಾಮ ಪ್ರಯಾಣಿಕರು, ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಯಿತು.