Breaking News

ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ’- ಮೈಸೂರು ದಸರಾ ಉದ್ಘಾಟಿಸಿ ಎಸ್‌ಎಂ ಕೃಷ್ಣ ಮಾತು

Spread the love

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಕ್ಕೆ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಯ ನೆಲೆವೀಡಾದ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ಚಾಲನೆ ನೀಡಲಾಯಿತು.

ಬೆಳಗ್ಗೆ 8.15 ರಿಂದ 8.45 ರೊಳಗಿನ ಶುಭ ತುಲಾ ಲಗ್ನದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ವೇದಿಕೆ ಯ ಎಡಬದಿಯ ಲ್ಲಿ ದ್ದ ಅಲಂಕೃತಳಾಗಿದ್ದ ಚಾಮುಂಡೇಶ್ವರಿ ಯ ಉತ್ಸವ ಮೂರ್ತಿ ಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ದಸರಾ ವನ್ನು ಉದ್ಘಾಟಿಸಿದರು.

ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಅವರ ಪತ್ನಿ ಚೆನ್ನಮ್ಮ, ಸಚಿವರುಗಳಾದ ಆರ್.ಅಶೋಕ್, ಸುನೀಲ್ ಕುಮಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಡಾ.ಸುಧಾಕರ್, ಶಶಿಕಲಾ ಜೊಲ್ಲೆ ಶಿವರಾಮ್ ಹೆಬ್ಬಾರ್ , ನಾರಾಯಣ ಗೌಡ ಸಾಥ್ ನೀಡಿದರು. ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಅರವಿಂದ್ ಬೆಲ್ಲದ್, ಹರ್ಷವರ್ಧನ್, ಮುನಿರಾಜ ಗೌಡ, ತನ್ವೀರ್ ಸೇಠ್, ಕೆ.ಮಹದೇವ್, ಶ್ರೀ ಕಂಠೇಗೌಡ, ಮೈಸೂರು ನಗರ ಪಾಲಿಕೆಯ ಮೇಯರ್‌ ಸುನಂದಾ ಪಾಲನೇತ್ರ, ಚಿಕ್ಕೋಡಿ ಕ್ಷೇತ್ರದ ಸಂಸದ ಅಣ್ಣಾ ಸಾಹೇಬ್ ಜೊಲ್ಲಾ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಉಪಸ್ಥಿತರಿದ್ದರು. ಅಧ್ಯಕ್ಷ ತೆಯನ್ನು ಶಾಸಕ ಜಿ.ಟಿ.ದೇವೇಗೌಡ ವಹಿಸಿದ್ದರು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ