Breaking News

ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಬಲಿ.. ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

Spread the love

ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಾಮಾನ್ಯ ಜನರು ಬಲಿಯಾಗುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಮಹಿಳೆ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ. ಒಂದೇ ಕುಟುಂಬದ ಮೂವರು ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಮಹಿಳೆ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ಮತ್ತಿಬ್ಬರಿಗೂ ಗಂಭೀರ ಗಾಯಗೊಂಡಿದ್ದಾರೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ