Breaking News

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ಯುವಕನ ಕೊಲೆ: ಯುವತಿ ಪೋಷಕರು ಸೇರಿ 10 ಮಂದಿ ಬಂಧನ

Spread the love

ಬೆಳಗಾವಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಜಿಲ್ಲೆಯ ಖಾನಾಪುರ ಹೊರವಲಯದಲ್ಲಿ ಸೆ.28ರಂದು ನಡೆದಿದ್ದ ಯುವಕನ ಕೊಲೆ ಪ್ರಕರಣದ ಹಂತಕರನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಯುವತಿಯ ತಂದೆ ಈರಪ್ಪ ಕಂಬಾರ, ತಾಯಿ ಸುಶೀಲಾ ಕಂಬಾರ, ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ಮುತಗೇಕರ್, ಕುತಬುದ್ದೀನ್ ಬೇಪಾರಿ, ಪ್ರಲ್ಹಾದ್ ಸುಗತೆ, ಮಂಜುನಾಥ ಗೋಂದಳಿ, ಗಣಪತಿ ಸುಗತೆ, ಪ್ರಶಾಂತ ಪಾಟೀಲ್, ಪ್ರವೀಣ್ ಪೂಜೇರಿ, ಶ್ರೀಧರ್ ಡೋಣಿ ಸೇರಿ ಒಟ್ಟು 10 ಜನ ಬಂಧಿತ ಆರೋಪಿಗಳು.

ಸೆ. 28ರಂದು ಅರ್ಬಾಜ್ ಮೃತದೇಹ ಖಾನಾಪುರ ಹೊರವಲಯದ ರೈಲು ಹಳಿಯಲ್ಲಿ ಕೈಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ