Breaking News
Home / ಜಿಲ್ಲೆ / ಬೆಂಗಳೂರು / ಗಲಭೆ ಪ್ರಕರಣ – 10 ಮಂದಿ ಫೇಸ್‍ಬುಕ್ ಲೈವ್, ಸಾವಿರಾರು ಜನರಿಗೆ ಆಮಂತ್ರಣ

ಗಲಭೆ ಪ್ರಕರಣ – 10 ಮಂದಿ ಫೇಸ್‍ಬುಕ್ ಲೈವ್, ಸಾವಿರಾರು ಜನರಿಗೆ ಆಮಂತ್ರಣ

Spread the love

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರಿಗೆ ಹೊಸ ಹೊಸ ಸಾಕ್ಷ್ಯಗಳು ಸಿಗುತ್ತಿವೆ. ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಗಲಭೆಗೆ 10 ಮಂದಿ ಫೇಸ್‍ಬುಕ್ ಲೈವ್ ಮಾಡುವ ಮೂಲಕ ಸಾವಿರಾರು ಜನರಿಗೆ ಆಮಂತ್ರಣ ನೀಡಲಾಗಿದೆ ಎಂಬುದು ತಿಳಿದುಬಂದಿದೆ.ಡಿಜೆ ಹಳ್ಳಿ ದೊಂಬಿ ಗಲಾಟೆಗೆ ಪುಂಡರನ್ನ ಸೇರಿಸಲು ಫೇಸ್‍ಬುಕ್ ಟ್ರಿಕ್ ಬಳಸಲಾಗಿದೆ.

ಗಲಾಟೆ ಶುರುವಾಗೋದಕ್ಕೂ ಮೊದಲೇ 10 ಮಂದಿ ಫೇಸ್‍ಬುಕ್ ಲೈವ್ ಮಾಡಿದ್ದರು. ಇದೇ ಖತರ್ನಾಕ್‍ಗಳು ಗಲಾಟೆ ನಡೆದ ದಿನ ಅಂದರೆ ಮಂಗಳವಾರ ರಾತ್ರಿ 50 ಜನರಿದ್ದ ಗುಂಪನ್ನು 5,000 ಮಾಡಿದ್ದರು. ನಮ್ಮ ಧರ್ಮಕ್ಕೆ ಅವಮಾನವಾಗಿದೆ ಬನ್ನಿ ಬನ್ನಿ ಅಂತ ಜನರನ್ನು ಕರೆದು ಗಲಾಟೆ ಮಾಡಿದ್ದಾರೆ.

ಇಬ್ರಾಹಿಂ ಎಂಬಾತ ಫೇಸ್‍ಬುಕ್ ಲೈವ್ ಮಾಡಿದ್ದನು. ಈತನ ಲೈವನ್ನು ಸಾವಿರಾರು ಬಂದಿ ವೀಕ್ಷಣೆ ಮಾಡಿದ್ದಾರೆ. ಫೇಸ್‍ಬುಕ್ ಲೈವ್ ಮಾಡಿದ್ದ 10 ಮಂದಿ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಶಾಸಕರ ಮನೆ ಬಳಿ ಹೆಚ್ಚು ಜನರನ್ನು ಸೇರಿಸಿದವರಾಗಿದ್ದಾರೆ. ಹೀಗಾಗಿ ಪೊಲೀಸರು ಫೇಸ್‍ಬುಕ್ ಲೈವ್ ಮಾಡಿದ ಪುಂಡರ ಬೆನ್ನು ಬಿದ್ದಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ