Breaking News

ಪೊಲೀಸರ ಸೋಗಿನಲ್ಲಿ ಬಂದು ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿ ಅಂದರ್​

Spread the love

ತುಮಕೂರು: ಪೊಲೀಸ್​ ಅಧಿಕಾರಿಯೆಂದು ಹೇಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಅಮೃತೂರು ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಮಮಂಗಲ ತಾಲೂಕು ದೊಡ್ಡನಾಗನಹಳ್ಳಿ ಗ್ರಾಮದ ನಿವಾಸಿ ಪ್ರದೀಪ @ ಕೆಂಚ (37) ಬಂಧಿತ ಆರೋಪಿ. ಕಳೆದ ಆಗಸ್ಟ್ 1 ರಂದು ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿ ಮಹಿಳೆಯೋರ್ವರನ್ನ ಸಾಹೇಬ್ರು ನಿನ್ನ ಕರಿತಿದ್ದಾರೆ ಬಾ ಅಂತಾ ಹೇಳಿ ಕುಣಿಗಲ್ ತಾಲೂಕಿನ ಶ್ರೀನಿವಾಸ ದೇವರ ಬೆಟ್ಟಕ್ಕೆ ಕರೆದೊಯ್ದು.. ಈ ವೇಳೆ ಮಹಿಳೆಗೆ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು 40 ಗ್ರಾಂ ಚಿನ್ನದ ಸರ, ಮೊಬೈಲ್, ಎಟಿಎಮ್ ಕಾರ್ಡ್ ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಅಮೃತೂರು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಪ್ರಕರಣ ನಡೆದು ಒಂದು ತಿಂಗಳ ನಂತರ ಆರೋಪಿಯನ್ನು ಖೆಡ್ಡಾಗೆ ಬೀಳಿಸುವುದರಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ