Breaking News

ಪೊಲೀಸರ ಸೋಗಿನಲ್ಲಿ ಬಂದು ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿ ಅಂದರ್​

Spread the love

ತುಮಕೂರು: ಪೊಲೀಸ್​ ಅಧಿಕಾರಿಯೆಂದು ಹೇಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಅಮೃತೂರು ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಮಮಂಗಲ ತಾಲೂಕು ದೊಡ್ಡನಾಗನಹಳ್ಳಿ ಗ್ರಾಮದ ನಿವಾಸಿ ಪ್ರದೀಪ @ ಕೆಂಚ (37) ಬಂಧಿತ ಆರೋಪಿ. ಕಳೆದ ಆಗಸ್ಟ್ 1 ರಂದು ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿ ಮಹಿಳೆಯೋರ್ವರನ್ನ ಸಾಹೇಬ್ರು ನಿನ್ನ ಕರಿತಿದ್ದಾರೆ ಬಾ ಅಂತಾ ಹೇಳಿ ಕುಣಿಗಲ್ ತಾಲೂಕಿನ ಶ್ರೀನಿವಾಸ ದೇವರ ಬೆಟ್ಟಕ್ಕೆ ಕರೆದೊಯ್ದು.. ಈ ವೇಳೆ ಮಹಿಳೆಗೆ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು 40 ಗ್ರಾಂ ಚಿನ್ನದ ಸರ, ಮೊಬೈಲ್, ಎಟಿಎಮ್ ಕಾರ್ಡ್ ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಅಮೃತೂರು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಪ್ರಕರಣ ನಡೆದು ಒಂದು ತಿಂಗಳ ನಂತರ ಆರೋಪಿಯನ್ನು ಖೆಡ್ಡಾಗೆ ಬೀಳಿಸುವುದರಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ