Breaking News

ಭಾರೀ ಮಳೆಗೆ ನೋಡನೋಡುತ್ತಲೇ ನೆಲಕಚ್ಚಿದ ಮನೆ.. ಪವಾಡವೆಂಬಂತೆ ಪಾರಾದ ಐವರು

Spread the love

ದಾವಣಗೆರೆ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರೋ ಪರಿಣಾಮ ಮನೆಯೊಂದು ಕ್ಷಣಾರ್ಧದಲ್ಲೇ ಕುಸಿದು ಮನೆಯಲ್ಲಿದ್ದವರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿರುವ ಘಟನೆ ಜಿಲ್ಲೆಯ ಐಗೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಗೊಲ್ಲರಹಟ್ಟಿಯ ಪಡಿತರ ಧಾನ್ಯ ವಿತರಕ ಸಿದ್ದಪ್ಪ ಎಂಬುವರ ಮನೆ ಕುಸಿತಗೊಂಡಿದ್ದು ಸಿದ್ದಪ್ಪ ದಂಪತಿ, ಇಬ್ವರು ಮಕ್ಕಳು ಹಾಗೂ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿ ಐವರು ಕುಳಿತಿರುವಾಗ ನೋಡನೋಡುತ್ತಲೇ ಮನೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಧವಸ, ಧಾನ್ಯ, ಬಟ್ಟೆ, ಇತರೆ ಸಾಮಗ್ರಿಗಳು ಮಣ್ಣಲ್ಲಿ ಹೂತಿವೆ. ಜಿಲ್ಲೆಯಲ್ಲಿ ವಾರದಿಂದ ಭಾರೀ ಮಳೆ ಹಿನ್ನೆಲೆ ಇಲ್ಲಿವರೆಗೆ ತಾಲೂಕಿನಲ್ಲಿ ಸುಮಾರು 20 ಕ್ಕೂ ಹೆಚ್ಚು ಮನೆ ಕುಸಿತ ಕಂಡಿವೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ