Breaking News

ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನ: ಎಚ್.ವಿಶ್ವನಾಥ್

Spread the love

ಮೈಸೂರು: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸೋಮವಾರ ಇಲ್ಲಿ ಲೇವಡಿ ಮಾಡಿದರು.

‘ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ನವದೆಹಲಿಗೆ ಕರೆಸಿಕೊಂಡು ಮಾತನಾಡಿದಾಗ; ರಾಷ್ಟ್ರ ರಾಜಕಾರಣಕ್ಕೆ ಬರುವೆ. ನನ್ನನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದೇಳುವ ಧೈರ್ಯವನ್ನು ಸಿದ್ದರಾಮಯ್ಯ ಮಾಡಬೇಕಿತ್ತು’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.

‘ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗ ನಿತ್ಯವೂ ಭ್ರಷ್ಟ ಎಂದು ವಾಗ್ದಾಳಿ ನಡೆಸುತ್ತಿದ್ದ ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ; ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಇದರಲ್ಲೇನೋ ರಾಜಕೀಯ ವಾಸನೆ ಇದೆ. ವಿಜಯೇಂದ್ರ, ಯಡಿಯೂರಪ್ಪ ಹಣಿಯುವ ತಂತ್ರಗಾರಿಕೆ ನಡೆದಿದೆ ಎನ್ನುತ್ತಿರುವುದು ಬೂಟಾಟಿಕೆಯ ಹೇಳಿಕೆ. ನೀವಿಬ್ಬರೂ ಭ್ರಷ್ಟಾಚಾರದ ಪರವೋ? ವಿರುದ್ಧವೋ? ಎಂಬುದನ್ನು ಮೊದಲು ಸ್ಪಷ್ಟಪಡಿಸಿ’ ಎಂದು ವಿಶ್ವನಾಥ್‌ ವಾಗ್ದಾಳಿ ನಡೆಸಿದರು.

‘ವೀರಶೈವ ಲಿಂಗಾಯತರ ಅನುಕಂಪ ಗಿಟ್ಟಿಸಲಿಕ್ಕಾಗಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪೈಪೋಟಿಗೆ ಬಿದ್ದವರಂತೆ ಆದಾಯ ತೆರಿಗೆ ಇಲಾಖೆಯ ದಾಳಿಯನ್ನು ಯಡಿಯೂರಪ್ಪ ಕುಟುಂಬಕ್ಕೆ ಸಮೀಕರಿಸಿ ಮಾತನಾಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್, ಜೆಡಿಎಸ್‌ಗೆ ಕಿಂಚಿತ್‌ ಲಾಭವಾಗಲ್ಲ. ಬಿಜೆಪಿಗೆ ನಷ್ಟವೂ ಆಗಲ್ಲ. ಏಕೆಂದರೇ ವೀರಶೈವ ಲಿಂಗಾಯತರು ಬುದ್ಧಿವಂತರು’ ಎಂದು ಅವರು ಕುಟುಕಿದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ