Breaking News

ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸಿದ ಹೊನ್ನಾಳಿ ರೇಣುಕಾಚಾರ್ಯ

Spread the love

ದಾವಣಗೆರೆ: ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್​ ನಿಂದ ಸಂಕಷ್ಟಕ್ಕೀಡಾದವರಿಗೆ ತನ್ನ ಕೈಲಾದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ಇದೀಗ ಮತ್ತ್ತೊಮ್ಮೆ ಬಡ ವಿದ್ಯಾರ್ಥಿನಿಯರಿಗೆ ಮೊಬೈಲ್​​ ನೀಡುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಜನೋಪಕಾರಿ ಕೆಲಸಗಳಿಗೆ ತಾನು ಎಂದೆಂದಿಗೂ ಸಿದ್ಧ ಎನ್ನುವ ರೇಣುಕಾಚಾರ್ಯರು ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ.

ಟಿ. ಗೋಪಗೊಂಡನಹಳ್ಳಿಯ ಬಿಂದು ಮತ್ತು ಸುಂಕದಕಟ್ಟೆ ಗ್ರಾಮದ ನರ್ಮದಾ ಎಂಬಿಬ್ಬರು ವಿದ್ಯಾರ್ಥಿಗಳು ಮೊಬೈಲ್​​ ಇಲ್ಲದೆ ಪರದಾಡುತ್ತಿದ್ದರು. ಇದರಿಂದ ಆನ್​​ ಲೈನ್​​ ಕ್ಲಾಸ್​​ ಗೆ ತೊಂದರೆಯಾಗುತ್ತಿತ್ತು. ಹೀಗಾಗಿ ರೇಣುಕಾಚಾರ್ಯ ಅವರು ಈ ಹಿಂದೆ ಆ ವಿಧ್ಯಾರ್ಥಿನಿಯರಿಗೆ ಭರವಸೆ ನೀಡಿದ್ದರು. ಅದರಂತೆ ಇದೀಗ ಅವರಿಗೆ ಸ್ಮಾರ್ಟ್​ ಫೋನ್​​ ಕೊಡಿಸಿ ನೆರವಾಗಿದ್ದಾರೆ.

ಇನ್ನು, ವಿದ್ಯಾರ್ಥಿನಿಯರು ತಮ್ಮ ಕ್ಷೇತ್ರದ ಶಾಸಕರ ಬಗ್ಗೆ ಹೆಮ್ಮೆ ಪಟ್ಟುಕೊಂಡು ಶಾಸಕ ರೇಣುಕಾಚಾರ್ಯ ಅವರಿಗೆ ಧನ್ಯವಾದ ಹೇಳಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ