Breaking News

ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

Spread the love

ಚಿಕ್ಕಮಗಳೂರು, ಅ.11- ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಕ್ಷಯ್.ಎಂ.ಕೆ. ಆರೋಪಿ ಯನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗು ವುದು ಎಂದು ತಿಳಿಸಿದ್ದಾರೆ.

12 ವರ್ಷದ ಬಾಲಕಿಯು ಅಂಗಡಿಯಿಂದ ಸಾಮಗ್ರಿ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಮೀನು ವ್ಯಾಪಾರಿಯೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಬಲವಂತವಾಗಿ ತನ್ನ ಗೂq್ಸï ವಾಹನದಲ್ಲಿ ಕೂರಿಸಿಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಹೇಗೋ ತಪ್ಪಿಸಿಕೊಂಡು ಬಂದ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಮತಾಂತರ ಆಗುವಂತೆಯೂ ಆರೋಪಿ ಒತ್ತಾಯಿಸಿದ ಎಂದು ಆರೋಪಿಸಿದ್ದಾರೆ.

ಪೊಲೀಸರು ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಸಿದ್ದರು. ನಿನ್ನೆ ಮಧ್ಯಾಹ್ನ ಪೊಲೀಸರ ಕಣ್ತಪ್ಪಿಸಿ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಎಲ್ಲಾ ಕಡೆಗಳಲ್ಲೂ ನಾಕಾಬಂದಿ ಹಾಕಿಸಿ ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮತ್ತೋರ್ವ ಬಾಲಕಿಯ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿ ಐವರ ಬಂಧನ

Spread the loveಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಅಪ್ರಾಪ್ತರು ಸೇರಿ ಐವರನ್ನು ಇಲ್ಲಿನ ಎಪಿಎಂಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ