ಬೆಂಗಳೂರು: ಹಲವು ದಿನಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಬೆಂಗಳೂರಿಗರನ್ನ ಕಂಗೆಡಿಸಿದೆ. ಇಂದು ಕೂಡ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಇತ್ತ ದೇವನಹಳ್ಳಿ ಏರ್ಪೋರ್ಟ್ ಬಳಿಯೂ ಭಾರೀ ಮಳೆಯಾಗಿದ್ದು ಏರ್ಪೋರ್ಟ್ ಅರೈವಲ್ ಮತ್ತು ಡಿಪಾರ್ಚರ್ ವೇ, ಪಾರ್ಕಿಂಗ್ ಬಳಿಯೂ ಕೆರೆಯಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇತ್ತ ಏರ್ಪೋರ್ಟ್ಗೆ ಹೋಗುವ ಪ್ಯಾಸೆಂಜರ್ಗಳು ಏರ್ಪೋರ್ಟ್ಗೆ ತೆರಳಬೇಕಿದ್ದ ಬಸ್ ಸಿಗದೇ ಪರದಾಡುವಂತಾಗಿದೆ. ಈ ವೇಳೆ ದೇವರಂತೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್ಪೋರ್ಟ್ಗೆ ಹೋಗಲು ಕಾದು ಸುಸ್ತಾಗಿದ್ದ ಪ್ರಯಾಣಿಕರಿಗೆ ನೆರವಾಗಿದ್ದಾನೆ. ಪ್ರಯಾಣಿಕರನ್ನ ಟ್ರ್ಯಾಕ್ಟರ್ಗೆ ಹತ್ತಿಸಿಕೊಂಡು ಏರ್ಪೋರ್ಟ್ಗೆ ಡ್ರಾಪ್ ಮಾಡಿ ಮಾನವೀಯತೆ ಮೆರೆದಿದ್ದಾನೆ.