Breaking News

ತುಂಗಭದ್ರಾ ಜಲಾಶಯದ ಮೂರು ಗೇಟ್ ಓಪನ್: 4,539 ಕ್ಯೂಸೆಕ್ ನೀರು ಹೊರಕ್ಕೆ

Spread the love

ಬಳ್ಳಾರಿ: ಗಣಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್ ನಿಂದ   ಅಂದಾಜು 4,539 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು.ಸದ್ಯ ತುಂಗಭದ್ರಾ ಜಲಾಶಯದಲ್ಲಿ 1,632.20 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಅರ್ಧ ಅಡಿ ಅಷ್ಟೇ ಬಾಕಿಯಿದೆ. 33,737 ಕ್ಯೂಸೆಕ್ ನಷ್ಟು ನೀರು ಈ ಜಲಾಶಯಕ್ಕೆ ಹರಿದು ಬರುತ್ತಿದೆ.

ಹೀಗಾಗಿ ಸಂಜೆ ಜಲಾಶಯದಿಂದ ಮೂರು ಕ್ರಸ್ಟ್ ಗೇಟ್ ಮೂಲಕ ಸುಮಾರು 1,513 ಕ್ಯೂಸೆಕ್ ನೀರನ್ನು ಹರಿ ಬಿಡಲಾಗಿದೆ.

ಒಟ್ಟು 6,533 ಕ್ಯೂಸೆಕ್ ನೀರನ್ನು ಹರಿಬಿಡಲು ನಿರ್ಧರಿಸಲಾಗಿದೆ. ಇದರ ಭಾಗವಾಗಿ ಇದೀಗ 4,539 ಕ್ಯೂಸೆಕ್ ನೀರನ್ನು ಬಿಡಲಾಗಿದೆ. ನದಿ ಪಾತ್ರದ ಜನರು ಎಚ್ಚರದಿಂದಿರಬೇಕು. ಅಪಾಯದ ಸ್ಥಳದಲ್ಲಿರುವ ಜನ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಜಲಾಶಯದ ಮಂಡಳಿ ಕೋರಿದೆ.


Spread the love

About Laxminews 24x7

Check Also

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Spread the loveಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್  ಹಂತದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ