Breaking News

ಅವರದ್ದೇ ಪಕ್ಷದಿಂದ ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಬಹಿರಂಗ -ಸಿ.ಟಿ ರವಿ

Spread the love

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್​ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ.

ಈ ಕುರಿತು ಬಿಜೆಪಿ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕುರಿತು ಟ್ವೀಟ್​ ಮಾಡಿ ಪ್ರತಿಕ್ರಿಯಿಸಿದ ಅವರು ‘ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು, ಕಚೇರಿಯಲ್ಲೇ ಬಹಿರಂಗಪಡಿಸಿದ್ದಾರೆ ಎಂದರೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬಹುದು’ ಎಂದು ಟೀಕಿಸಿದ್ದಾರೆ.

 


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ