ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿರೋದ್ರ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿದ್ಯುತ್ ಉತ್ಪಾದನೆ, ಕಲ್ಲಿದ್ದಲು ಬೇಡಿಕೆ ಬಗ್ಗೆ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ 98 ಸಾವಿರದ 863 ಮೆಟ್ರಿಕ್ ಟನ್ ಕಲ್ಲಿದ್ದಲಿನ ಸ್ಟಾಕ್ ಇದ್ದು, ಯಾವುದೇ ರೀತಿಯ ಪವರ್ ಕಟ್ಟ ಆಗಲ್ಲ ಎಂದಿದ್ದಾರೆ. ಇನ್ನು ಇದೇ ವೇಳೆ ನಿರಂತರ ಮಳೆಯಿಂದ ಬೆಳೆಹಾನಿ ಹಾಗೂ ಪ್ರಾಣಹಾನಿ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿಎಂ, ಮಳೆಯಿಂದ 21 ಜನ ಮೃತಪಟ್ಟಿದ್ದು, ಶೀಘ್ರವೇ ಪರಿಹಾರ ನೀಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.