Breaking News

ಕಾಂಗ್ರೆಸ್​ ಪಕ್ಷದಿಂದ 6 ವರ್ಷಗಳ ಕಾಲ ಸಲೀಂ ಉಚ್ಚಾಟನೆ; ಶಿಸ್ತು ಸಮಿತಿಯಿಂದ ಕ್ರಮ

Spread the love

ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾತನಾಡಿದ್ದ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಗ್ಗೆ ಮಾತಾಡಿದ್ದ ಸಲೀಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಜೊತೆ ಮಾತಾಡಿದ್ದ ಸಲೀಂ ವಿರುದ್ಧ ಕಾಂಗ್ರೆಸ್​ ಪಕ್ಷದ ಶಿಸ್ತು ಸಮಿತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಶಿಸ್ತು ಸಮಿತಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ವಿ.ಎಸ್. ಉಗ್ರಪ್ಪಗೆ ನೋಟಿಸ್ ನೀಡಲಾಗಿದೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿ ಆಗಿದೆ. ವಿ.ಎಸ್​. ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ರಿಂದ ನೋಟಿಸ್​ ಜಾರಿ ಮಾಡಲಾಗಿದೆ.

ಡಿ.ಕೆ. ಶಿವಕುಮಾರ್​ ಬಗ್ಗೆ ಉಗ್ರಪ್ಪ, ಸಲೀಂ ಮಾತುಕತೆ ವಿಚಾರವಾಗಿ ದೆಹಲಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಉಗ್ರಪ್ಪ, ಸಲೀಂ ಮಾತುಕತೆ ಬಗ್ಗೆ ವಿವರವಾದ ಮಾಹಿತಿ ಇಲ್ಲ. ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ. ಮಾಧ್ಯಮ ವಿಭಾಗದಿಂದ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದಷ್ಟೇ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ