Breaking News
Home / ಜಿಲ್ಲೆ / ಹಾವೇರಿ / ಬಾಲಕನ ಹೊಟ್ಟೆಯ ಮೇಲೆ ಹರಿದ ಕಬ್ಬು ತುಂಬಿದ ಟ್ರ್ಯಾಕ್ಟರ್

ಬಾಲಕನ ಹೊಟ್ಟೆಯ ಮೇಲೆ ಹರಿದ ಕಬ್ಬು ತುಂಬಿದ ಟ್ರ್ಯಾಕ್ಟರ್

Spread the love

ಹಾವೇರಿ: ಕಬ್ಬಿನ ಟ್ರ್ಯಾಕ್ಟರ್ ಬಾಲಕನ ಹೊಟ್ಟೆಯ ಮೇಲೆ ಹರಿದು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ರಾಣೇಬೆನ್ನೂರ ರಸ್ತೆಯ ಬಳಿ ನಡೆದಿದೆ.

 

ಪಟ್ಟಣದ ಗಣೇಶ ವಡ್ಡರ (11) ವರ್ಷದ ಬಾಲಕನ ಮೇಲೆ ಹಿಂಬದಿಯ ಟ್ರ್ಯಾಲಿ ಹರಿದಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ಗುತ್ತಲ ಸಮುದಾಯ ಆರೋಗ್ಯ ಕೇಂದ್ರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ತೀವ್ರವಾಗಿ ನರಳುತ್ತಾ ಬಿದ್ದಿದ್ದ ಬಾಲಕನ ಸ್ಥಿತಿ ಕಂಡು ಮಾಹಿಳಾ ಸಂಬಂಧಿಯೊಬ್ಬರು ರೋಧಿಸಿದ ದೃಶ್ಯ ಕಂಡು ಸಾರ್ವಜನಿಕರು ಮುಮ್ಮಲ ಮರುಗಿದರು. ಇತ್ತ ಚಾಲಕ ಹಾಗೂ ಟ್ರ್ಯಾಕ್ಟರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳಕ್ಕೆ ಗುತ್ತಲ ಠಾಣೆಯ ಎಎಸ್‌ಐ ವೈ. ಡಿ ಹಾವನೂರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿ ಕೆ ಶಿವಕುಮಾರ್ ಶಾಸಕರಿಗೆ ನೀಡಿರುವ ಎಚ್ಚರಿಕೆ ಕುರಿತು ಮಾತನಾಡುವುದಿಲ್ಲ ಎಂದಿದ್ದಾರೆ.

Spread the love ಹಾವೇರಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ವಿಚಾರದಲ್ಲಿ, ಆಂತರಿಕ ವಿಚಾರದಲ್ಲಿ ಹೇಳಿಕೆ ನೀಡದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ