ಹಾಸನ: ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಶಿರಾಡಿಘಾಟ್ ಮಾರನಹಳ್ಳಿ ಬಳಿ ನಡೆದಿದೆ.
ಮಂಜುನಾಥ್, ಮೃತ ದುರ್ದೈವಿ. ಮೃತ ವ್ಯಕ್ತಿ ಮಂಜುನಾಥ್ ಗೌರಿಬಿದನೂರು ಮೂಲದವರು ಎನ್ನಲಾಗಿದೆ. ಇನ್ನು ಲಾರಿಯಲ್ಲಿದ್ದ ಕ್ಲೀನರ್ ಕಾಲು ಕಟ್ ಆಗಿದೆ. ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.