Breaking News
Home / ರಾಜಕೀಯ / ಆಯುಧ ಪೂಜೆಗೆ ನಗರಸಭೆ ಸದಸ್ಯೆಗೆ ಆಹ್ವಾನ ನೀಡದ್ದಕ್ಕೆ ಮಾರಾಮಾರಿ..9 ಮಂದಿಗೆ ಗಾಯ

ಆಯುಧ ಪೂಜೆಗೆ ನಗರಸಭೆ ಸದಸ್ಯೆಗೆ ಆಹ್ವಾನ ನೀಡದ್ದಕ್ಕೆ ಮಾರಾಮಾರಿ..9 ಮಂದಿಗೆ ಗಾಯ

Spread the love

ಯಾದಗಿರಿ: ನಗರಸಭೆ ಸದಸ್ಯೆಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಬೆಂಬಲಿಗರು ಮತ್ತು ಆಯೋಜಕರ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಲಾಡಿಸ್ ಗಲ್ಲಿಯ ಭವಾನಿ ಮಂದಿರದ ಬಳಿ ನಡೆದಿದೆ.

ವಿಜಯದಶಮಿ ನಿಮಿತ್ತ ಆಯುಧ ಪೂಜೆ ಹಿನ್ನೆಲೆಯಲ್ಲಿ ಲಾಡಿಸ್ ಗಲ್ಲಿಯ ಭವಾನಿ ಮಂದಿರದ ಬಳಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ ಜಯಮ್ಮ ಅವರಿಗೆ ಆಹ್ವಾನ ನೀಡಿಲ್ಲ ಎಂಬ ವಿಚಾರವಾಗಿ ನಗರಸಭೆ ಸದಸ್ಯೆ ಬೆಂಬಲಿಗರು ಮತ್ತು ಕಾರ್ಯಕ್ರಮ ಆಯೋಜಕರ ನಡುವೆ ಮಾತಿನ ಚಕಮಕಿ ನಡೆದಿದೆ.

 

ಕೆಲಹೊತ್ತಿನ ಬಳಿಕ ಗಲಾಟೆ ಶುರುವಾಗಿದ್ದು, ಪರಸ್ಪರರು ಗಲಾಟೆ ಶುರು ಹಚ್ಚಿಕೊಂಡಿದ್ದಾರೆ. ಈ ವೇಳೆ ಕುರ್ಚಿ, ಟೇಬಲ್, ಕಲ್ಲು, ಬಡಿಗೆ ಹಿಡಿದು ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ನಗರಸಭೆ ಸದಸ್ಯೆ ಪತಿ ಸೇರಿದಂತೆ ಒಂಬತ್ತು ಮಂದಿಗೆ ಗಾಯಗಳಾಗಿದ್ದು ಮೂವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ‌ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಿಂದೂ ಸೇವಾ ಸಮಿತಿಯ 19 ಮಂದಿ ಮೇಲೆ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ