Breaking News

ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ

Spread the love

ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು.

ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು.

ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ ಆಗಮಿಸಿತ್ತು. ಸುನೀಲ್ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು. ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಸಲಾಯಿತು.


Spread the love

About Laxminews 24x7

Check Also

ಹಿಜಬ್‌ ಮೂಲಕ ಶಾಲಾ ಮಕ್ಕಳಲ್ಲಿ ದ್ವೇಷ, ಭೇದಭಾವ ಉಂಟು ಮಾಡುವ ಕೆಲಸ ಆಗ್ತಿದೆ: ಸುನೀಲ್‌ ಕುಮಾರ್‌

Spread the loveಉಡುಪಿ: ಹಿಜಬ್ ಮೂಲಕ ಶಾಲಾ ಮಕ್ಕಳಲ್ಲಿ ದ್ವೇಷ ಹಾಗೂ ಭೇದಭಾವ ಉಂಟುಮಾಡುವ ಕೆಲಸ ಆಗುತ್ತಿದೆ ಎಂದು ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ