Breaking News

ಸಿದ್ದರಾಮಯ್ಯ, ಎಚ್‌ಡಿಕೆಗೆ ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ: ಹೆಬ್ಬಾರ

Spread the love

ಶಿರಸಿ: ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಅವರಿಬ್ಬರಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ’ ಎಂದು ಲೇವಡಿ ಮಾಡಿದರು.

‘ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪರಸ್ಪರ ಟೀಕಿಸಿಕೊಳ್ಳುತ್ತಾರೆ. ಒಮ್ಮೆಲೆ ಸಂಘ ಪರಿವಾರದ ಮೇಲೆ ಹರಿಹಾಯುತ್ತಾರೆ. ಇದು ಅವರಿಬ್ಬರೂ ಗೊಂದಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಿದೆ’ ಎಂದರು.

‘ವಿಜಯದಶಮಿ ಮುಗಿಯಲಿ ಎಂದು ಕಾಯುತ್ತಿದ್ದೆವು. ಇಂದಿನಿಂದ ಎಲ್ಲ ಸಚಿವರೂ ಹಾನಗಲ್ ಕ್ಷೇತ್ರದಲ್ಲಿ ಬೀಡು ಬಿಡಲಿದ್ದು ಅ.28ರ ವರೆಗೆ ನಿರಂತರ ಪ್ರಚಾರ ನಡೆಸಲಿದ್ದೇವೆ’ ಎಂದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ