Breaking News

ಇಂದಿನಿಂದ 5 ದಿನ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

Spread the love

ಪಟ್ಟಣಂತಿಟ್ಟ, ಆ.17- ವಿಶ್ವವಿಖ್ಯಾತ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಇಂದು ಬೆಳಗ್ಗೆ ತೆರೆಯಲಾಗಿದೆ.

ಮಲೆಯಾಳಂ ಪಂಚಾಂಗದ ಪ್ರಕಾರ ಇಂದಿನಿಂದ ಆಗಸ್ಟ್ 21ರ ವರೆಗೆ ಅಯ್ಯಪ್ಪ ಸ್ವಾಮಿಗೆ ಮಾಸಿಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ ಎಂದು ಟ್ರವಾಂಕುರ್ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ.ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹಾಜರುಪಡಿಸಬೇಕು. ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನವು ಕಟ್ಟುನಿಟ್ಟಿನ ನಿಬಂಧನೆಗಳನ್ನು ಜಾರಿಗೊಳಿಸಿದೆ.

ಆ.21ರಂದು ಸಂಜೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ ಮತ್ತೆ ಓಣಂ ಪ್ರಯುಕ್ತ ಆ.29 ರಿಂದ ಸೆ.2ರ ವರೆಗೆ ದೇವಸ್ಥಾನವನ್ನು ತೆರೆಯಲಾಗುತ್ತದೆ. ವಾರ್ಷಿಕ ಶಬರಿ ಮಲೆ ಯಾತ್ರೆ ನ.16ರಿಂದ ಆರಂಭವಾಗಲಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ