Breaking News
Home / ರಾಜಕೀಯ / ಬೆಳೆ ವಿಮೆ ಸೌಲಭ್ಯ : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಳೆ ವಿಮೆ ಸೌಲಭ್ಯ : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

Spread the love

ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದು ಎಂದು ಜಂಟಿಕೃಷಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಬೆಳೆಸಾಲ ಪಡೆದ ರೈತರಿಗೆ ಬೆಳೆಸಾಲ ಮಂಜೂರು ಮಾಡುವಾಗ, ಕಡ್ಡಾಯವಾಗಿ ಬೆಳೆವಿಮೆಗೆ ಒಳಪಡಿಸಲಾಗುವುದು, ಬೆಳೆ ಸಾಲ ಪಡೆಯದ ಇಚ್ಚೆಯುಳ್ಳ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿ ಹಾಗೂ ಆಧಾರ ಸಂಖ್ಯೆಯನ್ನು ನೀಡಿ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಾಯಿಸಿಕೊಳ್ಳಬೇಕು.

ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ಜಿಲ್ಲೆಯಲ್ಲಿ ಅಧಿಸೂಚನೆಗೊಂಡ ಬೆಳೆಗಳ ಪೈಕಿ ಚನ್ನಗಿರಿ ತಾಲ್ಲೂಕಿನಲ್ಲಿ ಜೋಳ ಮತ್ತು ಸೂರ್ಯಕಾಂತಿ ಹಿಂಗಾರು ಹಂಗಾಮು ಆದರೆ ಭತ್ತ ಬೇಸಿಗೆ ಹಂಗಾಮಿಗೆ ಒಳಪಡುತ್ತದೆ. ಹಾಗೆಯೇ ಜಗಳೂರು ತಾಲ್ಲೂಕಿನಲ್ಲಿ ಮುಸುಕಿನ ಜೋಳ, ಕಡಲೆ, ಈರುಳ್ಳಿ, ರಾಗಿ, ನೀರಾವರಿ ಹಾಗೂ ಮಳೆ ಆಶ್ರಿತ ಜೋಳ, ಸೂರ್ಯಕಾಂತಿ(ನೀ), ಸೂರ್ಯಕಾಂತಿ(ಮ.ಆ), ಟೊಮ್ಯಾಟೊ ಹಿಂಗಾರು ಹಂಗಾಮು ಬೆಳೆಗಳಾದರೆ, ಶೇಂಗಾ ಬೇಸಿಗೆ ಹಂಗಾಮು ಬೆಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಸೂರ್ಯಕಾಂತಿ, ಜೋಳ, ರಾಗಿ, ಮುಸುಕಿನ ಜೋಳ, ಟೊಮ್ಯಾಟೊ ಹಿಂಗಾರು ಹಂಗಾಮು ಬೆಳೆಯಾದರೆ ಟೊಮ್ಯಾಟೊ, ಶೇಂಗಾ ಬೇಸಿಗೆ ಹಂಗಾಮು ಬೆಳೆಗಳಾಗಿವೆ. ಹÉೂನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಜೋಳ, ಸೂರ್ಯಕಾಂತಿ, ಹುರುಳಿ, ಕಡಲೆ, ಮುಸುಕಿನ ಜೋಳ ಹಿಂಗಾರು ಹಂಗಾಮು ಬೆಳೆಯಾದರೇ ಭತ್ತ, ಶೇಂಗಾ, ಸೂರ್ಯಕಾಂತಿ ಬೇಸಿಗೆ ಹಂಗಾಮು ಬೆಳೆಗಳಾಗಿವೆ. ಹರಿಹರ ತಾಲ್ಲೂಕಿನಲ್ಲಿ ಜೋಳ(ನೀ), ಜೋಳ(ಮ.ಆ), ಸೂರ್ಯಕಾಂತಿ(ನೀ), ಸೂರ್ಯಕಾಂತಿ(ಮ.ಆ) ಹಿಂಗಾರು ಹಂಗಾಮು ಬೆಳೆಗಳಾದರೆ ಭತ್ತ, ಶೇಂಗಾ ಬೇಸಿಗೆ ಹಂಗಾಮು ಬೆಳಗಳಾಗಿವೆ.

ಹಿಂಗಾರು ಹಂಗಾಮಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ಮೆಕ್ಕೆಜೋಳ, ಸೂರ್ಯಕಾಂತಿ, ಹುರುಳಿ, ರಾಗಿ, ಜೋಳ ಬೆಳೆಗಳಿಗೆ ಬೆಳೆ ವಿಮೆಗೆ ನೋಂದಾಯಿಸಲು ನ.15 ಕೊನೆ ದಿನವಾಗಿದ್ದು, ಈರುಳ್ಳಿ, ಟೊಮ್ಯಾಟೋ ಬೆಳೆಗಳಿಗೆ ನ.30. ಹಾಗೂ ಕಡಲೆ ಬೆಳೆಗೆ ಡಿ.16 ರಂದು ಬೆಳೆ ವಿಮೆಗೆ ನೊಂದಾಯಿಸಲು ಕೊನೆ ದಿನವಾಗಿರುತ್ತದೆ. ಬೇಸಿಗೆ ಹಂಗಾಮಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ಭತ್ತ, ಶೇಂಗಾ, ಸೂರ್ಯಕಾಂತಿ, ಟೊಮ್ಯಾಟೋ ಬೆಳೆ ವಿಮೆಗೆ ನೋಂದಾಯಿಸಲು 2022 ರ ಫೆ.28 ಕೊನೆಯ ದಿನವಾಗಿದೆ.

ರೈತಬಾಂಧವರು ಅರ್ಜಿಯೊಂದಿಗೆ ಆಧಾರ್ ಸಂಖ್ಯೆ ನಮೂದಿಸಿ, ನಿಗದಿತ ದಿನಾಂಕದೊಳಗೆ ಬೆಳೆ ವಿಮೆ ಯೋಜನೆಯಡಿ ನೋಂದಾವಣಿ ಮಾಡಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ತೋಟಗಾರಿಕೆ ಇಲಾಖೆ, ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ