Breaking News

ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆವಿವಿಧ ಹಳ್ಳಿಗಳ ಮುಖಂಡರು ಒತ್ತಾಯ

Spread the love

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿ.ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅವರನ್ನು ವಿವಿಧ ಹಳ್ಳಿಗಳ ಮುಖಂಡರು ಬುಧವಾರ ಒತ್ತಾಯಿಸಿದರು.

ಸಂಸದೆ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ಸಂಸದರೊಂದಿಗೆ ಅವರ ಪುತ್ರಿ ಶ್ರದ್ಧಾ ಅವರೊಂದಿಗೆ ಮಾತನಾಡಿದ ಮುಖಂಡರು ಕ್ಷೇತ್ರಕ್ಕೆ ಚುನಾವಣಾ ರಾಜಕಾರಣಕ್ಕೆ ಆಹ್ವಾನಿಸಿದರು. ‘ಸುರೇಶ ಅಂಗಡಿ ಅವರು ಇದ್ದಾಗ ಅವರನ್ನು ಬೆಂಬಲಿಸಿದ್ದೇವೆ. ಕ್ರಿಯಾಶೀಲರಾಗಿರುವ ನೀವು ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಬೆಂಬಲಿಸುವುದಕ್ಕೆ ಸಿದ್ಧವಿದ್ದೇವೆ’ ಎಂದು ತಿಳಿಸಿದರು. ಅವರಲ್ಲಿ ಕೆಲವರು ಗ್ರಾ.ಪಂ. ಸದಸ್ಯರೂ ಇದ್ದರು.

ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಶ್ರದ್ಧಾ, ‘ತಾಯಿ (ಮಂಗಲಾ) ಸಂಸದೆಯಾಗಿದ್ದಾರೆ. ನಾವೇನೇ ತೀರ್ಮಾನ ಕೈಗೊಳ್ಳುವುದಕ್ಕೂ ಹೈಕಮಾಂಡ್ ಸಮ್ಮತಿ ಬೇಕಾಗುತ್ತದೆ. ನಿಮ್ಮ ಅಭಿಮಾನಕ್ಕೆ ಧನ್ಯವಾದಗಳು’ ಎಂದಷ್ಟೆ ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ