ಗೋಕಾಕ: ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಮಹಾಂತಯ್ಯ ಮಲ್ಲಿಕಾರ್ಜುನ ಮಠದ ಇವರು ಇದೆ ತಿಂಗಳು 29ರಂದು ಹರಿಯಾಣ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಯನ್ನು ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಬಿ ಮನ್ನಿಕೇರಿ, ಡಿಪಿಇಒ ಸಾಂಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹಾಗೂ ಶಿಕ್ಷಕ ವೃಂದದವರು ಅಭಿನಂಧಿಸಿದ್ದಾರೆ.