Breaking News

ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆ

Spread the love

ಮೈಸೂರು: ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಹತ್ಯೆಯಾದ ಮಹಿಳೆಯನ್ನು ಬೆಟ್ಟದಪುರ ಗ್ರಾಮದ ಗಂಗಮ್ಮ (45) ಎಂದು ಗುರುತಿಸಲಾಗಿದೆ. ಆರೋಪಿಗಳು ಗಂಗಮ್ಮರನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಕಾವೇರಿ ನದಿಗೆ ಎಸೆದಿದ್ದಾರೆ.

ಮೃತ ಗಂಗಮ್ಮಗೆ ಮಕ್ಕಳಿಲ್ಲ. ಗಂಡ ಸತ್ತು ಹೋಗಿದ್ದಾರೆ. ಆಗಸ್ಟ್ 7 ರಿಂದ ಗಂಗಮ್ಮ ನಾಪತ್ತೆಯಾಗಿದ್ದರು. ಕೊಲೆ ಆರೋಪಿಗಳು ಮದ್ಯದ ಅಮಲಿನಲ್ಲಿ ಹತ್ಯೆ ಬಗ್ಗೆ ಮಾತನಾಡಿದ್ದಾರೆ. ವಿಚಾರ ತಿಳಿದು ಪೊಲೀಸರು ಗಂಗಮ್ಮರ ಸಂಬಂಧಿಗಳಾದ ಶಿವರಾಜ್, ರವಿಶಂಕರ್, ಕಿರಣ್, ಮಂಜು, ರಾಜೇಶ್ ಮತ್ತು ವೆಂಕಟೇಶ್ ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

 


Spread the love

About Laxminews 24x7

Check Also

ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?

Spread the love ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ