Breaking News

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ

Spread the love

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ 46, ಸೌಮ್ಯಾ ಹಾದಿಮನಿ 19, ಶ್ವೇತಾ ಹಾದಿಮನಿ 16, ಸಾಕ್ಷಿ ಹಾದಿಮನಿ 11, ಸೃಜನ‌ ಹಾದಿಮನಿ 8 ಮೃತ ದುರ್ದೈವಿಗಳು. ಜುಲೈ 6 ರಂದು ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು 4 ಮಕ್ಕಳೊಂದಿಗೆ ವಿಷ ಸೇವಿಸಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ