Breaking News

ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ

Spread the love

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ.

2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ 72,000 ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಸಿಗಲಿದೆ. ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಡ್ಡಾಯ ವರ್ಗಾವಣೆ ಆಗಿದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಮೊದಲ ಹಂತದ ಕೌನ್ಸೆಲಿಂಗ್ ನವೆಂಬರ್ 2 ರಂದು ನಡೆಯಲಿದೆ. ಎರಡನೇ ಹಂತದ ಕೌನ್ಸೆಲಿಂಗ್ 2021ರ ಜನವರಿ 18 ರಂದು ನಡೆಯಲಿದೆ.

ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆ ಒಂದನೇ ಹಂತದ ಕೌನ್ಸೆಲಿಂಗ್ ನವೆಂಬರ್ 24 ರಿಂದ ಡಿಸೆಂಬರ್ 2 ರ ವರೆಗೆ ನಡೆಯಲಿದೆ. ಎರಡನೇ ಹಂತದ ಕೌನ್ಸೆಲಿಂಗ್ ಜನವರಿ 19 ರಿಂದ 27ರ ವರೆಗೆ ನಡೆಯಲಿದೆ.

ಜಿಲ್ಲೆಯೊಳಗಿನ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಮೊದಲ ಹಂತದಲ್ಲಿ ನವೆಂಬರ್ 19 ರಿಂದ ಹಾಗೂ ಎರಡನೇ ಹಂತದ ಕೌನ್ಸೆಲಿಂಗ್ ಜನವರಿ 19 ರಿಂದ ಆರಂಭವಾಗಲಿದೆ.

ಘಟಕದ ಹೊರಗೆ ಮತ್ತು ವಲಯದೊಳಗಿನ ಕೋರಿಕೆ ವರ್ಗಾವಣೆಗೆ ನವೆಂಬರ್ 16 ರಿಂದ ಮೊದಲ ಹಂತದ ಕೌನ್ಸೆಲಿಂಗ್ ನಡೆಯಲಿದ್ದು, ಫೆಬ್ರವರಿ 1 ರಿಂದ ಎರಡನೇ ಹಂತದ ಕೌನ್ಸೆಲಿಂಗ್ ನಡೆಯಲಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ