Breaking News

ಡಿ.ಕೆ.ಶಿವಕುಮಾರ್​ ಆಪ್ತನ ಮನೆ ಮೇಲೆ ಐಟಿ ದಿಢೀರ್​ ದಾಳಿ

Spread the love

ಧಾರವಾಡ: ನಗರದ ಖ್ಯಾತ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಪ್ತರಾಗಿರುವ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

 

 

ಧಾರವಾಡದ ದಾಸನಕೊಪ್ಪದ ಮನೆ ಮೇಲೆ ಗೋವಾದಿಂದ ಬಂದ 5 ಜನರ ಐಟಿ ತಂಡ ದಾಳಿ ನಡೆಸಿ ತಪಾಸಣೆಯಲ್ಲಿ ತೊಡಗಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರ ತಾಲೂಕಿನ ಉಪ್ಪುಂದ ಮೂಲದ ಯು. ಬಿ. ಶೆಟ್ಟಿ ಕ್ಲಾಸ್ ಒನ್ ಕಾಂಟ್ರ್ಯಾಕ್ಟರ್ ಜೊತೆಗೆ ಉದ್ಯಮಿಯಾಗಿದ್ದಾರೆ. ಜೊತೆಗೆ ಡಿ.ಕೆ.ಶಿವಕುಮಾರ್​ ಆಪ್ತರು ಎನ್ನಲಾಗಿದ್ದು ಇತ್ತೀಚಿಗೆ ಡಿಕೆಎಸ್​ ಆಪ್ತ ವಲಯದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ ಶಾಲೆ, ಕಾಲೇಜು ಉದ್ಯಮದಲ್ಲಿ ತೊಡಗಿದ್ದ ಶೆಟ್ಟಿ ಹಲವು ವರ್ಷಗಳಿಂದ ಡಿಕೆಎಸ್​ ಆಪ್ತ ಎಂತಲೇ ಗುರುತಿಸಿಕೊಂಡಿದ್ದಾರೆ. ಯು.ಬಿ.ಶೆಟ್ಟಿ ಮನೆಗೆ ಐಟಿ ಅಧಿಕಾರಿಗಳಿ ದಾಳಿ ಇಡುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಮನೆಗೆ ಭೇಟಿ ನೀಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಐಟಿ ರೇಡ್​ ಆಗಲು ಕಾರಣ ತಿಳಿದು ಬಂದಿಲ್ಲ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ