Breaking News
Home / ಜಿಲ್ಲೆ / ಬೆಂಗಳೂರು / ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ

ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ

Spread the love

ಬೆಂಗಳೂರು,ಅ.29- ಇಂದು ನಿಧನರಾದ ನಟ ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಪುನೀತ್ ಅವರ ತಂದೆ ವರನಟ ಡಾ.ರಾಜ್‍ಕುಮಾರ್ ಅವರು ನಿಧನರಾದಾಗ ಅವರ ನೇತ್ರಗಳನ್ನು ಕೂಡ ದಾನ ಮಾಡಲಾಗಿತ್ತು. ಆ ಸಂದರ್ಭದಲ್ಲೇ ತಮ್ಮ ನೇತ್ರಗಳನ್ನು ದಾನ ಮಾಡುವ ಸಹಮತಕ್ಕೆ ಸಹಿ ಹಾಕಿದ್ದರು.

ಅದರಂತೆ ಇಂದು ಅಪ್ಪು ಅವರ ನೇತ್ರಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ. ಡಾ.ರಾಜ್ ಅವರು ಮೃತಪಟ್ಟ ನಂತರ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದರು. ಈಗ ಅವರ ದಾರಿಯಲ್ಲಿ ಪುನೀತ್ ಅವರು ಸಾಗಿದ್ದು, ಇವರು ಕೂಡ ಇಬ್ಬರು ಅಂಧರ ಬಾಳಿಗೆ ಬೆಳಕಾಗಲಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ