Breaking News

ಪುನೀತ್ ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಲಿಲ್ಲ: ಬೊಮ್ಮಾಯಿ

Spread the love

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್​ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ನಟ ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ ಸಹ ನಿಗದಿ ಮಾಡಲಾಗಿತ್ತು. ಕನ್ನಡ ರಾಜ್ಯೋತ್ಸವದ ಕುರಿತು ಖಾಸಗಿ ವೆಬ್​ಸೈಟ್​​ ಆರಂಭಿಸುವ ಕುರಿತು ನನ್ನನ್ನು ಭೇಟಿಯಾಗಲು ಉದ್ದೇಶಿಸಿದ್ದರು. ಆದರೆ ವಿಧಿಯಟ ಆಟ ಬೇರೆಯೇ ಆಗಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ತಂದೆ ಮೇರು ನಟ ಡಾ.ರಾಜ್​ಕುಮಾರ್ ಅವರ ಗುಣಗಳನ್ನೇ ಪುನೀತ್ ರಾಜ್​ಕುಮಾರ್ ಅಳವಡಿಸಿಕೊಂಡಿದ್ದರು. ಅವರ ಗೌರವಕ್ಕೆ ಧಕ್ಕೆಯಾಗದಂತೆ ಅಭಿಮಾನಿಗಳು ನಡೆದುಕೊಳ್ಳಬೇಕು. ಶಾಂತಿ ಕಾಪಾಡಬೇಕು. ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.


Spread the love

About Laxminews 24x7

Check Also

ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.

Spread the loveಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ