Breaking News

ಪುನೀತ್ ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಲಿಲ್ಲ: ಬೊಮ್ಮಾಯಿ

Spread the love

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್​ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ನಟ ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ ಸಹ ನಿಗದಿ ಮಾಡಲಾಗಿತ್ತು. ಕನ್ನಡ ರಾಜ್ಯೋತ್ಸವದ ಕುರಿತು ಖಾಸಗಿ ವೆಬ್​ಸೈಟ್​​ ಆರಂಭಿಸುವ ಕುರಿತು ನನ್ನನ್ನು ಭೇಟಿಯಾಗಲು ಉದ್ದೇಶಿಸಿದ್ದರು. ಆದರೆ ವಿಧಿಯಟ ಆಟ ಬೇರೆಯೇ ಆಗಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ತಂದೆ ಮೇರು ನಟ ಡಾ.ರಾಜ್​ಕುಮಾರ್ ಅವರ ಗುಣಗಳನ್ನೇ ಪುನೀತ್ ರಾಜ್​ಕುಮಾರ್ ಅಳವಡಿಸಿಕೊಂಡಿದ್ದರು. ಅವರ ಗೌರವಕ್ಕೆ ಧಕ್ಕೆಯಾಗದಂತೆ ಅಭಿಮಾನಿಗಳು ನಡೆದುಕೊಳ್ಳಬೇಕು. ಶಾಂತಿ ಕಾಪಾಡಬೇಕು. ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ